HARI DINADALI ONDA NARARIGE
💥 ಹರಿ ದಿನದಲಿ ಉಂಡ ನರರಿಗೆ💥
ಹರಿ ದಿನದಲಿ ಉಂಡ ನರರಿಗೆ ಘೋರ
ನರಕ ತಪ್ಪದು ಎಂದು ಶ್ರುತಿಯು ಸಾರುತಲಿದೆ || ಪ ||
ಗೋವ ಕೊಂದ ಪಾಪ ಸಾವಿರ ವಿಪ್ರರ
ಜೀವಹತ್ಯೆ ಮಾಡಿದ ಪಾಪವು
ಭಾವಜನಯ್ಯನ ದಿನದಲುಂಡವರಿಗೆ
ಕೀವಿನೊಳಗೆ ಹಾಕಿ ಕುದಿಸುವ ಯಮನು ||೧||
ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿ
ಅಂದಿನ ಅನ್ನವು ನಾಯಿಯ ಮಾಂಸವು
ಮಂದರ ಧರನ ದಿನದಲುಂಡವರನು
ಹಂದಿಯ ಸುಡುವಂತೆ ಸುಡಿಸುವ ಯಮನು ||೨||
ಅನ್ನ ಉದಕ ತಾಂಬೂಲ ದರ್ಪಣಗಳು
ಚಿನ್ನ ವಸ್ತ್ರಗಳೆಲ್ಲ ವರ್ಜಿತವು
ತನ್ನ ಸತಿಯ ಸಂಗ ಮಾಡುವ ಮನುಜನ
ಬೆನ್ನಲಿ ಕರುಳ ತೆಗೆಸುವ ಯಮನು ||೩||
ಜಾವದ ಜಾಗರ ಕ್ರತು ನಾಲ್ಕು ಸಾವಿರ
ಜಾವನಾಲ್ಕರ ಫಲಕೆ ಮಿತಿಯಿಲ್ಲವು
ದೇವದೇವನ ದಿನದಿ ನಿದ್ರೆಯಗೈದರೆ ಹುರಿ-
ಗಾವಲಿನೊಳು ಹಾಕಿ ಹುರಿಸುವ ಯಮನು ||೪||
ಇಂತು ಏಕಾದಶೀ ಉಪವಾಸ ಜಾಗರ
ಸಂತತ ಕ್ಷೀರಾಬ್ಧಿಶಯನನ ಪೂಜೆ
ಸಂತೋಷದಿಂದಲಿ ಮಾಡಿದ ಜನರಿಗ
💥 ಹರಿ ದಿನದಲಿ ಉಂಡ ನರರಿಗೆ💥
ಹರಿ ದಿನದಲಿ ಉಂಡ ನರರಿಗೆ ಘೋರ
ನರಕ ತಪ್ಪದು ಎಂದು ಶ್ರುತಿಯು ಸಾರುತಲಿದೆ || ಪ ||
ಗೋವ ಕೊಂದ ಪಾಪ ಸಾವಿರ ವಿಪ್ರರ
ಜೀವಹತ್ಯೆ ಮಾಡಿದ ಪಾಪವು
ಭಾವಜನಯ್ಯನ ದಿನದಲುಂಡವರಿಗೆ
ಕೀವಿನೊಳಗೆ ಹಾಕಿ ಕುದಿಸುವ ಯಮನು ||೧||
ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿ
ಅಂದಿನ ಅನ್ನವು ನಾಯಿಯ ಮಾಂಸವು
ಮಂದರ ಧರನ ದಿನದಲುಂಡವರನು
ಹಂದಿಯ ಸುಡುವಂತೆ ಸುಡಿಸುವ ಯಮನು ||೨||
ಅನ್ನ ಉದಕ ತಾಂಬೂಲ ದರ್ಪಣಗಳು
ಚಿನ್ನ ವಸ್ತ್ರಗಳೆಲ್ಲ ವರ್ಜಿತವು
ತನ್ನ ಸತಿಯ ಸಂಗ ಮಾಡುವ ಮನುಜನ
ಬೆನ್ನಲಿ ಕರುಳ ತೆಗೆಸುವ ಯಮನು ||೩||
ಜಾವದ ಜಾಗರ ಕ್ರತು ನಾಲ್ಕು ಸಾವಿರ
ಜಾವನಾಲ್ಕರ ಫಲಕೆ ಮಿತಿಯಿಲ್ಲವು
ದೇವದೇವನ ದಿನದಿ ನಿದ್ರೆಯಗೈದರೆ ಹುರಿ-
ಗಾವಲಿನೊಳು ಹಾಕಿ ಹುರಿಸುವ ಯಮನು ||೪||
ಇಂತು ಏಕಾದಶೀ ಉಪವಾಸ ಜಾಗರ
ಸಂತತ ಕ್ಷೀರಾಬ್ಧಿಶಯನನ ಪೂಜೆ
ಸಂತೋಷದಿಂದಲಿ ಮಾಡಿದ ಜನರಿಗ
ನಂತ ಫಲವನೀವ ಪುರಂದರವಿಠಲ ||೫||
Comments
Post a Comment