PATIYA PADAKKE ERAGI SUDHAMA CHARITRE
ಪತಿಯ ಪಾದಕ್ಕೆರಗಿ ಮತಿ ಬೇಡಿ ಪಾರ್ವತಿ |
ಸುತಗೆ ವಂದನೆಯ ಮಾಡಿದಳು ||
ಅತಿ ಭಕ್ತಿಯಿಂದಲಿ ಸ್ತುತಿಸುವ ಜನರಿಗೆ ಸ- |
ದ್ಗತಿಯಾಗಲೆನುತ ಪೇಳಿದಳು || ೧ ||
ಸುಧಾಮನೆಂಬೋರ್ವ ಸೂಕ್ಷ್ಮದ ಬ್ರಾಹ್ಮಣ |
ಹೊದಿಯಲಿಕ್ಕಿಲ್ಲ ಆಶನವಿಲ್ಲ ||
ಗದಗದ ನಡುಗುತ ಮಧುರ ಮಾತಾಡುತ |
ಸದನದೊಳಿರುತಿದ್ದನಾಗ || ೨ ||
ಪ್ರಾತಃ ಕಾಲದಲ್ಲೆದ್ದು ನಿತ್ಯ ಕರ್ಮವ ಮುಗಿಸಿ |
ದ್ಗತಿಯಾಗಲೆನುತ ಪೇಳಿದಳು || ೧ ||
ಸುಧಾಮನೆಂಬೋರ್ವ ಸೂಕ್ಷ್ಮದ ಬ್ರಾಹ್ಮಣ |
ಹೊದಿಯಲಿಕ್ಕಿಲ್ಲ ಆಶನವಿಲ್ಲ ||
ಗದಗದ ನಡುಗುತ ಮಧುರ ಮಾತಾಡುತ |
ಸದನದೊಳಿರುತಿದ್ದನಾಗ || ೨ ||
ಪ್ರಾತಃ ಕಾಲದಲ್ಲೆದ್ದು ನಿತ್ಯ ಕರ್ಮವ ಮುಗಿಸಿ |
ನಾಥನ ಧ್ಯಾನ ಮಾಡುತಲಿ ||
ಪಾತ್ರರ ಮನೆಗ್ಹೋಗಿ ಯಾಚನೆಗಳ ಮಾಡಿ | ಗ್ರಾಸ
ತರುವನು ಮುಷ್ಟಿ ತುಂಬ || ೩ ||
ಪತಿವೃತೆ ಹೆಂಡತಿ ಪತಿ ತಂದದ್ದೆ ಸಾಕೆಂದು |
ಪಾತ್ರರ ಮನೆಗ್ಹೋಗಿ ಯಾಚನೆಗಳ ಮಾಡಿ | ಗ್ರಾಸ
ತರುವನು ಮುಷ್ಟಿ ತುಂಬ || ೩ ||
ಪತಿವೃತೆ ಹೆಂಡತಿ ಪತಿ ತಂದದ್ದೆ ಸಾಕೆಂದು |
ಹಿತದಿಂದ ಪಾಕ ಮಾಡುವಳು ||
ಅತಿ ಭಕ್ತಿಯಿಂದಲಿ ಪತಿಗೆ ಭೋಜನ ಬಡಿಸಿ |
ಅತಿ ಭಕ್ತಿಯಿಂದಲಿ ಪತಿಗೆ ಭೋಜನ ಬಡಿಸಿ |
ಮತಿವಂತಿ ಉಳಿದದ್ದುಂಬುವಳು || ೪ ||
ಹಸಿವೆ ತೃಷೆಗಳಿಂದ ಅತಿಕ್ಲೇಶವಾಗಿದ್ದು |
ಹಸಿವೆ ತೃಷೆಗಳಿಂದ ಅತಿಕ್ಲೇಶವಾಗಿದ್ದು |
ಪತಿಕೂಡೆ ಮಾತನಾಡಿದಳು ||
ಗತಿಯೇನು ನಮಗಿನ್ನು ಹಿತದವರ್ಯಾರಿಲ್ಲ ಸ- |
ದ್ಗತಿಯೇನೆನುತ ಪೇಳಿದಳು || ೫ ||
ಪೊಡವಿಯೊಳಗೆ ನಿಮ್ಮ ಒಡಹುಟ್ಟಿದವರಿಲ್ಲೆ |
ಗತಿಯೇನು ನಮಗಿನ್ನು ಹಿತದವರ್ಯಾರಿಲ್ಲ ಸ- |
ದ್ಗತಿಯೇನೆನುತ ಪೇಳಿದಳು || ೫ ||
ಪೊಡವಿಯೊಳಗೆ ನಿಮ್ಮ ಒಡಹುಟ್ಟಿದವರಿಲ್ಲೆ |
ಒಡನೆ ಆಡಿದ ಗೆಳೆಯರಿಲ್ಲೆ ||
ಕರೆದು ಕೂಡಿಸಿಕೊಂಡು ಬಿರುಸು ಮಾತ್ಹೆಳುವ |
ಕರೆದು ಕೂಡಿಸಿಕೊಂಡು ಬಿರುಸು ಮಾತ್ಹೆಳುವ |
ಹಿರಿಯರು ದಾರಿಲ್ಲೆ ನಿಮಗೆ || ೬ ||
ಚಿಕ್ಕಂದಿಲ್ಲೋದಿಲ್ಲೆ ಹೆತ್ತವರ್ಹೆಳಿಲ್ಲೆ |
ಚಿಕ್ಕಂದಿಲ್ಲೋದಿಲ್ಲೆ ಹೆತ್ತವರ್ಹೆಳಿಲ್ಲೆ |
ಉತ್ತಮ ಗುರುಗೋಳಿಲ್ಲೆನು
ಹೊತ್ತು ವೇಳೆಗಾಗೋ ಮಿತ್ರರು ಯಾರಿಲ್ಲೆ
ಹೊತ್ತು ವೇಳೆಗಾಗೋ ಮಿತ್ರರು ಯಾರಿಲ್ಲೆ
ಮತ್ತೆ ಕೇಳಿದಳು ಕ್ಲೇಶದಲಿ || ೭ ||
ಮಡದಿ ಮಾತನು ಕೇಳಿ ಮನದಲಿ ಯೋಚಿಸಿ |
ಹುಡುಗನಾಗಿರಲಿಕ್ಕೆ ಹೋಗಿ ||
ಗುರುಕುಲ ವಾಸದಲಿ ಹರಿ ನಾವು ಓದಿದ್ದು |
ಮಡದಿ ಮಾತನು ಕೇಳಿ ಮನದಲಿ ಯೋಚಿಸಿ |
ಹುಡುಗನಾಗಿರಲಿಕ್ಕೆ ಹೋಗಿ ||
ಗುರುಕುಲ ವಾಸದಲಿ ಹರಿ ನಾವು ಓದಿದ್ದು |
ಹರಿ ಹೊರ್ತು ಮತ್ತೊಬ್ಬರಿಲ್ಲಾ || ೮ ||
ಇನ್ನೊಬ್ಬರೇತಕೆ ಅನ್ಯರಪೇಕ್ಷೇಕೆ |
ಇನ್ನೊಬ್ಬರೇತಕೆ ಅನ್ಯರಪೇಕ್ಷೇಕೆ |
ಮನ್ನಿಸಿ ಹೋಗಿ ಬರ್ರೆಂದಳು ||
ಇನ್ನೇನು ಕೊಡತಿಯೆ ಹರಿ ಮುಂದೆ ಇಡಲಿಕ್ಕೆ |
ಇನ್ನೇನು ಕೊಡತಿಯೆ ಹರಿ ಮುಂದೆ ಇಡಲಿಕ್ಕೆ |
ಚೆನ್ನಾಗಿ ಕೇಳಿದನಾಗ || ೯ ||
ಗಾಬರಿಯಾದಳು ಸಾಗಿ ತಾ ನಡೆದಳು |
ಗಾಬರಿಯಾದಳು ಸಾಗಿ ತಾ ನಡೆದಳು |
ಬೇಗ ತಂದಳು ಅವಲಕ್ಕಿ ||
ಬಾಗಿ ವಸ್ತ್ರದೊಳು ಬೇಗ ಕಟ್ಟಿಕೊಟ್ಟು |
ಬಾಗಿ ವಸ್ತ್ರದೊಳು ಬೇಗ ಕಟ್ಟಿಕೊಟ್ಟು |
ಹೋಗಿ ಬರ್ರೆನುತ ಪೇಳಿದಳು || ೧೦ ||
ಅಂಗಳವನು ಬಿಟ್ಟು ಮುಂದಕೆ ಬಂದನು |
ಅಂಗಳವನು ಬಿಟ್ಟು ಮುಂದಕೆ ಬಂದನು |
ಹಂಗ ಹಾರುವುದು ಎಡಕೆ ||
ಮಂಗಳವಾಗುವುದು ರಂಗನ ದರುಶನ |
ಸಂದೇಹವಿಲ್ಲದಾಗುವುದು || ೧೧ ||
ಬಾಗಿಲವನು ಬಿಟ್ಟು ಸಾಗಿ ಮುಂದಕೆ ಬರಲು |
ಮಂಗಳವಾಗುವುದು ರಂಗನ ದರುಶನ |
ಸಂದೇಹವಿಲ್ಲದಾಗುವುದು || ೧೧ ||
ಬಾಗಿಲವನು ಬಿಟ್ಟು ಸಾಗಿ ಮುಂದಕೆ ಬರಲು |
ಕಾಗಿ ಹಾರ್ಹೋದವು ಬಲಕೆ ||
ಆಗುವುದು ನಮಗಿನ್ನು ಆಗುವುದು ಶುಭ ಚಿನ್ಹ |
ಆಗುವುದು ಹರಿ ಕೃಪೆಯಿಂದ || ೧೨ ||
ಹೀಗೆಂದ ಬ್ರಾಹ್ಮಣ ಮುಂದಕೆ ನಡೆದನು |
ಆಗುವುದು ನಮಗಿನ್ನು ಆಗುವುದು ಶುಭ ಚಿನ್ಹ |
ಆಗುವುದು ಹರಿ ಕೃಪೆಯಿಂದ || ೧೨ ||
ಹೀಗೆಂದ ಬ್ರಾಹ್ಮಣ ಮುಂದಕೆ ನಡೆದನು |
ಕಂಡನು ಕಮಲ ಪುಷ್ಪಗಳ ||
ರಂಗನ ಹೆಂಡರಿಗೆ ಹೆರಳಿಗೆ ಬೇಕೆಂದು |
ತೆಗೆದುಕೊಂಡನು ಕಮಲ ಪುಷ್ಪಗಳ || ೧೩ ||
ಹರಿಯುವ ಜಲವೆಲ್ಲ ಹರಿಯಭಿಷೇಕವೆಂ- |
ರಂಗನ ಹೆಂಡರಿಗೆ ಹೆರಳಿಗೆ ಬೇಕೆಂದು |
ತೆಗೆದುಕೊಂಡನು ಕಮಲ ಪುಷ್ಪಗಳ || ೧೩ ||
ಹರಿಯುವ ಜಲವೆಲ್ಲ ಹರಿಯಭಿಷೇಕವೆಂ- |
ದ್ಹರುಷದಲಿ ತುಂಬಿಕೊಂಡು ||
ಕರದಲ್ಲಿ ಹಿಡಕೊಂಡು ಪುರದ ಬಾಗಿಲ ಮುಂದೆ |
ಕರದಲ್ಲಿ ಹಿಡಕೊಂಡು ಪುರದ ಬಾಗಿಲ ಮುಂದೆ |
ಹರಿ ಹ್ಯಾಗೆ ದೊರಕುವ ನೆಂದ || ೧೪ ||
ನಿಂತನು ಬ್ರಾಹ್ಮಣನ ಅನಂತ ರೂಪದಿ ಧ್ಯಾನ |
ನಿಂತನು ಬ್ರಾಹ್ಮಣನ ಅನಂತ ರೂಪದಿ ಧ್ಯಾನ |
ಅಂತ ರಂಗದಲಿ ಮಾಡುತಲಿ ||
ಸಂತೋಷದಿಂದಲಿ ಧರಿಸಿದ ದಶರೂಪ- |ದಿಂದ
ಬಂದೆನ್ನ ಕಾಯೆಂದ || ೧೫ ||
ಹರಕು ವಸ್ತ್ರವನುಟ್ಟು ಹರಿ ಧ್ಯಾನ ಮಾಡುವ |
ಸಂತೋಷದಿಂದಲಿ ಧರಿಸಿದ ದಶರೂಪ- |ದಿಂದ
ಬಂದೆನ್ನ ಕಾಯೆಂದ || ೧೫ ||
ಹರಕು ವಸ್ತ್ರವನುಟ್ಟು ಹರಿ ಧ್ಯಾನ ಮಾಡುವ |
ವಿಪ್ರನ ಕಂಡು ಚಾರಕರು ||
ಬರಬೇಡಿರೊಳಗೆ ಹಿರಿಯರಪ್ಪಣೆಯಿಲ್ಲ |
ಬರಬೇಡಿರೊಳಗೆ ಹಿರಿಯರಪ್ಪಣೆಯಿಲ್ಲ |
ತಿರುಗಿ ಹೋಗೆನುತ ಹೇಳಿದರು || ೧೬ ||
ಅಂದ ಮಾತನು ಕೇಳಿ ಅಂಜಿದ ಬ್ರಾಹ್ಮಣ |
ಇಂದಿರಾರಮಣಗ್ಹೇಳೆಂದ ||
ಹೆಸರು ಸುಧಾಮನಂತೆ ಹಸಿದು ಬಂದಾರೆಂದು |
ವಸುದೇವ ತನಯಗ್ಹೇಳಿದರು || ೧೭ ||
ಕೇಳಿದ ಹರಿಯೆದ್ದು ಬಹಳ ಹರುಷದಿಂದ |
ಅಂದ ಮಾತನು ಕೇಳಿ ಅಂಜಿದ ಬ್ರಾಹ್ಮಣ |
ಇಂದಿರಾರಮಣಗ್ಹೇಳೆಂದ ||
ಹೆಸರು ಸುಧಾಮನಂತೆ ಹಸಿದು ಬಂದಾರೆಂದು |
ವಸುದೇವ ತನಯಗ್ಹೇಳಿದರು || ೧೭ ||
ಕೇಳಿದ ಹರಿಯೆದ್ದು ಬಹಳ ಹರುಷದಿಂದ |
ಬೇಗನೆ ಕರೆತನ್ನಿರವನ ||
ಹೋಗು ಹೋಗೆಂದರೆ ಸಾಗಿ ಮುಂದಕೆ ಬರಲು |
ಹೋಗು ಹೋಗೆಂದರೆ ಸಾಗಿ ಮುಂದಕೆ ಬರಲು |
ಬಾಗಿಲಿಗೆ ಬಂದ ಸುಧಾಮ || ೧೮ ||
ಬಂದ ಭಕ್ತನ ನೋಡಿ ಆನಂದದಿಂದೆದ್ದು |
ಬಂದ ಭಕ್ತನ ನೋಡಿ ಆನಂದದಿಂದೆದ್ದು |
ವಂದಿಸಿ ಆಸನವ ಹಾಕಿದರು ||
ಚಂದದಿಂದಲಿ ಕರವ ಹಿಡಿದು ಮಾತಾಡುತ |
ಚಂದದಿಂದಲಿ ಕರವ ಹಿಡಿದು ಮಾತಾಡುತ |
ಬಂದ ಕಾರಣವ ಕೇಳಿದರು || ೧೯ ||
ಮಂದಗಮನೆ ಸಹಿತ ತಂದ ಉದಕದಿಂದ |
ಚಂದದಿಂದಲಿ ಪಾದ ತೊಳೆದು ||
ಗಂಧ ಕೇಶರ ಹಚ್ಚಿ ಚೆಂದ ಚಾಮರದಿಂದ |
ಮಂದಗಮನೆ ಸಹಿತ ತಂದ ಉದಕದಿಂದ |
ಚಂದದಿಂದಲಿ ಪಾದ ತೊಳೆದು ||
ಗಂಧ ಕೇಶರ ಹಚ್ಚಿ ಚೆಂದ ಚಾಮರದಿಂದ |
ಅಂದದಿ ಗಾಳಿ ಬೀಸಿದರು || ೨೦ ||
ಹಸಿದು ಬಂದಾರೆಂದು ಹಸಿವೆಗೆ ತಕ್ಕಂಥ |
ಹಸಿದು ಬಂದಾರೆಂದು ಹಸಿವೆಗೆ ತಕ್ಕಂಥ |
ಹಸನಾದ ಹಣ್ಣು ಸಕ್ಕರೆಯು ||
ಕುಸುಮ ನಾಭನು ತಾನು ಪನ್ನೀರು ತಂದೀಡೆ |
ಕುಸುಮ ನಾಭನು ತಾನು ಪನ್ನೀರು ತಂದೀಡೆ |
ಉಂಡು ಕೈತೊಳೆದ ಸುಧಾಮ || ೨೧ ||
ಮಂದರಧರಗಿನ್ನು ಸುಂದರ ಸತಿಯರು |
ಮಂದರಧರಗಿನ್ನು ಸುಂದರ ಸತಿಯರು |
ತಂದರು ತಬಕ ವಿಳ್ಯವನು ||
ಇಂದಿರೆರಮಣನು ಬಂದ ಸುಧಾಮನು |
ಇಂದಿರೆರಮಣನು ಬಂದ ಸುಧಾಮನು |
ಚಂದದಿ ಮೆಲೆದರು ವಿಳ್ಯವನು || ೨೨ ||
ಶ್ರಮ ಬಹಳವಾಗಿದೆ ಶ್ರಮಿಸಿಕೊಳ್ಳಿರೆಂದು |
ಶ್ರಮ ಬಹಳವಾಗಿದೆ ಶ್ರಮಿಸಿಕೊಳ್ಳಿರೆಂದು |
ಸೆಳೆ ಮಂಚ ತಂದ್ಹಾಕಿದರು ||
ಶಾಲು ಸಕಲಾತಿಯು ಮೇಲಾದ ಹಾಸಿಗೆ |
ಶಾಲು ಸಕಲಾತಿಯು ಮೇಲಾದ ಹಾಸಿಗೆ |
ಮೇಲೆ ಮಲಗಿದನು ಸುಧಾಮ || ೨೩ ||
ಅಂದಿನ ರಾತ್ರಿಯಲಿ ಮಂದಗಮನೇಯರ ಬಿಟ್ಟು |
ಅಂದಿನ ರಾತ್ರಿಯಲಿ ಮಂದಗಮನೇಯರ ಬಿಟ್ಟು |
ಬಂದು ಮಲಗಿದನು ಶ್ರೀಹರಿಯು ||
ಹಿಂದಿನ ವೃತ್ತಾಂತ ಒಂದೊಂದು ಸ್ಮರಿಸುತ |
ಆನಂದದಿ ಹರಿಯು ಸುಧಾಮ || ೨೪ ||
ಅಂದಿನ ಸ್ನೇಹವು ಇಂದೇಕೆ ನೆನಪಾಯ್ತು |
ಅಂದಿನ ಸ್ನೇಹವು ಇಂದೇಕೆ ನೆನಪಾಯ್ತು |
ಬಂದೀರಿ ಬಹುದಿನಕೆಂದ ||
ಹೆಂಡತಿ ಮಕ್ಕಳು ಇಹರೇನು ನಿಮಗೆಂದು |
ಹೆಂಡತಿ ಮಕ್ಕಳು ಇಹರೇನು ನಿಮಗೆಂದು |
ಇಂದಿರೆ ರಮಣ ಕೇಳಿದನು || ೨೫ ||
ಹೆಂಡತಿ ಕಳುಹಿದಳು ರಂಗನ ದರುಷನ |
ಹೆಂಡತಿ ಕಳುಹಿದಳು ರಂಗನ ದರುಷನ |
ಕೊಂಡು ಬಾರೆನುತ ಪೇಳಿದಳು ||
ತಂದದ್ದು ಕೊಡಲಿಕ್ಕೆ ಸಂದೇಹವೇತಕ್ಕೆ |
ತಂದದ್ದು ಕೊಡಲಿಕ್ಕೆ ಸಂದೇಹವೇತಕ್ಕೆ |
ತಂಡುಲ ಹಿಡಿದು ಜಗ್ಗಿದನು || ೨೬ ||
ಮುಷ್ಟಿತುಂಬವಲಕ್ಕಿ ಮುಕ್ಕಿದ ಹರಿ ಬೇಗ |
ಮುಷ್ಟಿತುಂಬವಲಕ್ಕಿ ಮುಕ್ಕಿದ ಹರಿ ಬೇಗ |
ನಕ್ಕರು ಸತಿಯರೆಲ್ಲ ||
ಇಷ್ಟೇ ಸಾಕು ಎಂದು ಗಟ್ಯಾಗಿ ಕೈ ಹಿಡಿಯೆ |
ಇಷ್ಟೇ ಸಾಕು ಎಂದು ಗಟ್ಯಾಗಿ ಕೈ ಹಿಡಿಯೆ |
ಕೊಟ್ಟನು ಭಕ್ತನಿಗೆ ಐಶ್ವರ್ಯ || ೨೭ ||
ಹದಿನಾರು ಸಾವಿರ ಚದುರೆಯರ ಕರೆಸಿದ |
ಹದಿನಾರು ಸಾವಿರ ಚದುರೆಯರ ಕರೆಸಿದ |
ಕೊಡಿಸಿದೆಲ್ಲರಿಗೆ ತಂಡುಲವ ||
ಉಳಿಸಿದ ಅವಲಕ್ಕಿ ಉಣಲಿಕ್ಕೆ ಮಾರ್ಗಕ್ಕೆ |
ಉಳಿಸಿದ ಅವಲಕ್ಕಿ ಉಣಲಿಕ್ಕೆ ಮಾರ್ಗಕ್ಕೆ |
ಬೇಕೆಂದು ಬಿಗಿದು ಕಟ್ಟಿದರು || ೨೮ ||
ರನ್ನದ ಬಾಗಿಲಿಗೆ ಚಿನ್ನದ ಚೌಕಟ್ಟು |
ರನ್ನದ ಬಾಗಿಲಿಗೆ ಚಿನ್ನದ ಚೌಕಟ್ಟು |
ಹೊನ್ನ ಹೊಸ್ತಲವ ನಿರ್ಮಿಸಿದ ||
ರನ್ನ ಮಾಣಿಕ ಬಿಗಿದ ತೊಲಿ ಕಂಬ ಗಿಳಿಬೋದು |
ಪನ್ನಗಶಯನ ನಿರ್ಮಿಸಿದ || ೨೯ ||
ಇರಿರಿ ನಾಲ್ಕುದಿವಸ ತ್ವರೆ ಯಾಕೆ ಮಾಡುವಿರಿ |
ರನ್ನ ಮಾಣಿಕ ಬಿಗಿದ ತೊಲಿ ಕಂಬ ಗಿಳಿಬೋದು |
ಪನ್ನಗಶಯನ ನಿರ್ಮಿಸಿದ || ೨೯ ||
ಇರಿರಿ ನಾಲ್ಕುದಿವಸ ತ್ವರೆ ಯಾಕೆ ಮಾಡುವಿರಿ |
ಇರಲಿಕ್ಕೆ ಬಾರದೆಯೆಂದಾ ||
ನೆರೆ ಹೊರೆ ಯಾರಿಲ್ಲ ತರುಣಿಯೊಬ್ಬಳಿಹಳು |
ನೆರೆ ಹೊರೆ ಯಾರಿಲ್ಲ ತರುಣಿಯೊಬ್ಬಳಿಹಳು |
ಇರಲಿ ನಾ ಹೇಗೆ ಪೇಳೆಂದ || ೩೦ ||
ಪಾದಕೆ ಎರಗಿ ತಾ ಸಾಗಿ ಮುಂದಕೆ ಬಂದ |
ಪಾದಕೆ ಎರಗಿ ತಾ ಸಾಗಿ ಮುಂದಕೆ ಬಂದ |
ಬಾಗಿಲಿಗೆ ಬಂದ ಸುಧಾಮ ||
ಹೋಗಿರಿ ಹಿಂದಕೆ ಹೋಗಿ ಬರುತೇನೆನಲು |
ಹೋಗಿರಿ ಹಿಂದಕೆ ಹೋಗಿ ಬರುತೇನೆನಲು |
ಬಾಗಿ ಕೈ ಮುಗಿದ ಶ್ರೀಹರಿಯು || ೩೧ ||
ಮುಂದಕೆ ಬಂದನು ಇಂದೇನು ಕೊಡಲಿಲ್ಲ |
ಮುಂದಕೆ ಬಂದನು ಇಂದೇನು ಕೊಡಲಿಲ್ಲ |
ಹೆಂಡತಿಗೆ ಹೇಳಲೇನೆಂದ ||
ನಿಂತನು ಒಣಿಯಲಿ ಮಂದಿರ ಸಿಗಲಿಲ್ಲ |
ನಿಂತನು ಒಣಿಯಲಿ ಮಂದಿರ ಸಿಗಲಿಲ್ಲ |
ಹೆಂಡತಿಯ ಕಂಡ ಸುಧಾಮ || ೩೨ ||
ಮಂದಿರವನ್ನೆಲ್ಲ ಕಂಡನು ಐಶ್ವರ್ಯ |
ಚಂದದಿಂದಾಭರಣ ಕಂಡ ||
ಇಂದಿರಾಪತಿಯನ್ನು ಕಂಡು ಬಂದುದರಿಂದ |
ಮಂದಿರವನ್ನೆಲ್ಲ ಕಂಡನು ಐಶ್ವರ್ಯ |
ಚಂದದಿಂದಾಭರಣ ಕಂಡ ||
ಇಂದಿರಾಪತಿಯನ್ನು ಕಂಡು ಬಂದುದರಿಂದ |
ಬಂದಿತು ಸಕಲ ಸಂಪತ್ತು || ೩೩ ||
ರವಿವಾರ ಹಾಡಿದರೆ ರಾಜಕಾರ್ಯವಾಗುವುದು |
ರವಿವಾರ ಹಾಡಿದರೆ ರಾಜಕಾರ್ಯವಾಗುವುದು |
ಬಂಜೆಗೆ ಮಕ್ಕಳಾಗುವವು ||
ಬರಡೆಮ್ಮೆ ಕರೆಯೋದು ಬಡತನ ಹಿಂಗುವುದು |
ಗುರುವಾರ ಹಾಡಿದವರಿಗೆ || ೩೪ ||
ಶ್ರೀನಿವಾಸನ ಧ್ಯಾನ ಮೌನದಿಂದಲಿ ಮಾಡಿ |
ಬರಡೆಮ್ಮೆ ಕರೆಯೋದು ಬಡತನ ಹಿಂಗುವುದು |
ಗುರುವಾರ ಹಾಡಿದವರಿಗೆ || ೩೪ ||
ಶ್ರೀನಿವಾಸನ ಧ್ಯಾನ ಮೌನದಿಂದಲಿ ಮಾಡಿ |
ನಾನಾ ಸಂಪತ್ತು ಪಡೆದರು ||
ಅದರ ವಿಷಯ ತಿಳಿದು ಗತಿ ಮೋಕ್ಷ ಇರಲೆಂದು |
ಅದರ ವಿಷಯ ತಿಳಿದು ಗತಿ ಮೋಕ್ಷ ಇರಲೆಂದು |
ಶ್ರೀ ಹರಿ ಕೊಡು ದೇವ ಸಿರಿಯ || ೩೫ ||
ಇದು ಭಾಗವತವೆನ್ನಿ ಇದು ಭಾಗವತವೆನ್ನಿ |
ಇದು ಭಾಗವತವೆನ್ನಿ ಇದು ಭಾಗವತವೆನ್ನಿ |
ಇದು ಭಾಗವತಕೆ ಕೀಲಗಳು |
ಇದಕೆ ಪ್ರಿಯನು ನಮ್ಮ ಪುರಂದರವಿಠ್ಠಲ |
ಇದಕೆ ಪ್ರಿಯನು ನಮ್ಮ ಪುರಂದರವಿಠ್ಠಲ |
ಇದರಿಂದ ಮುಕ್ತಿ ಕೊಡುವನು || ೩೬ ||
Comments
Post a Comment