ENU SUKRUTAVA MADIDALO

ಏನು ಸುಕೃತವ ಮಾಡಿದಳೋ ತಾ ಯಶೋದೆ ಶ್ರೀನಿಧಿಯಾದ ಕೃಷ್ಣನ್ನ ಕರೆದು ಮುದ್ದಿಸುವಳಂತೆ || ಪ || 

ಗಂಗಾಜನಕನಿಗೆ ಗಡಿಗೆ ನೀರೆರೆವಳಂತೆ | ಮಂಗಳಾಂಗಗೆ ಭಾಮೆ ಶೃಂಗರಿಸುವಳಂತೆ | 
ತುಂಗ ಭೂಧರನ್ನ ತೊಟ್ಟಿಲೊಳು ತೂಗುವಳಂತೆ | ಕಂಗಳಿಗಗೋಚರನ ಕರೆದಪ್ಪಿಕೊಂಬಳಂತೆ || 1 || 

ನಗವನೆತ್ತಿದವನ ಮಗುವೆಂದೆತ್ತುವಳಂತೆ | ನಿಗಮಗೋಚರನ ತಾ ನಿಟ್ಟಿಪಳಂತೆ | 
ಅಗಣಿತ ಸತ್ವನ್ನ ಹಗ್ಗದಿ ಕಟ್ಟುವಳಂತೆ | ಮಿಗೆ ನಿತ್ಯತೃಪ್ತಗೆ ಪಾಲನೆರೆವಳಂತೆ || 2 || 

ಬಹುಮುಖನಿಗೆ ಭಾಮೆ ಮುದ್ದುಕೊಡುವಳಂತೆ ಅಹಿತಲ್ಪನಿಗೆ ಹಾವ ತುಳಿದೀಯೆಂಬಳಂತೆ | 
ಮಹಾದೈತ್ಯದಲ್ಲಣನಿಗೆ ಬಹು ಭಯವ ತೋರುವಳಂತೆ | ಮಹಿಮ ನರಸಿಂಹಗೆ ಗುಮ್ಮನ ತೋರುವಳಂತೆ || 3 || 

ಚತುರ್ಮುಖಪಿತನ ಸುತನೆಂದೆತ್ತುವಳಂತೆ | ಶ್ರುತಿವಿನುತಗೆ ಜೋಗುಳ ಪಾಡುವಳಂತೆ | 
ಶತರವಿತೇಜಗಾರತಿಯನೆತ್ತುವಳಂತೆ | ಗತಭೀತನಿಗೆ ಭಾಮೆ ರಕ್ಷೆಯಿಕ್ಕುವಳಂತೆ || 4 || 

ಕಡೆಗೋಲ ನೇಣ ಕೈಯಲಿ ಪಿಡಿದೊಲವಿಂದ | ಪಡುಗಡಲತಡಿಯ ದ್ವಾರಕೆನಿಲಯ |

ಬಿಡದೆ ನೆಲೆಸಿದ ಹಯವದನ ಮುದ್ದು | ಉಡುಪಿನ ಕೃಷ್ಣನ ಉಡಿಯೊಳೆತ್ತುವಳಂತೆ || 5 || 

Comments

Popular posts from this blog

Kaksha Taratamya