Posts

NAGARA CHOWTI NAGARA PANCHAMI

  ನಾಗ ರ  ಚೌತಿ ಮತ್ತು   ನಾಗರ ಪಂಚಮಿ ‌ ಪ್ರತಿಯೊಬ್ಬ ಹೆಣ್ಣು ಮಕ್ಕಳು ಈ ವ್ರತವನ್ನು ಆಚರಿಸಬೇಕು.. ಹೆಣ್ಣು ಮಕ್ಕಳು ಚೌತಿಯ ದಿನ ಹಾಲು ಎರೆಯಬೇಕು ಹೊರಗೆ ಕಲ್ಲು ನಾಗಪ್ಪನಿಗೆ.. ...ಪಂಚಮಿ ದಿನ ಗಂಡಸರು ಮನೆಯಲ್ಲಿ ಪೂಜೆ ಮಾಡಿ ಹಾಲೆರೆಯಬೇಕು . ಚತುರ್ಥಿಯ  ದಿನ ಹೆಣ್ಣುಮಕ್ಕಳು  ಸ್ನಾನದ ನಂತರ ಹೊಸ ವಸ್ತ್ರ ಧರಿಸಿ, ಸೌಭಾಗ್ಯದ ಚಿಹ್ನೆಗಳನ್ನು ಧರಿಸಿಕೊಂಡು, ಕಲ್ಲು ನಾಗಪ್ಪನಿಗೆ  ಅಥವಾ  ಹುತ್ತಕ್ಕೆ  ಹಾಲು ಅಭಿಷೇಕ ಮಾಡಿ ಅರಿಶಿನ ಹಚ್ಚಿದ ಗೆಜ್ಜೆವಸ್ತ್ರ, ಅರಿಶಿನ-ಕುಂಕುಮ, ಜೋಳದ ಅರಳು, ನೆನೆದ ಕಡ್ಲಿ, ಹೂ-ಕೇದಿಗೆ,  ಗರಿಕೆ-ಪತ್ರಿ ಏರಿಸಬೇಕು. ತಂಬಿಟ್ಟು, ಜೋಳದರಳಿನ ಉಂಡೆ, ಎಳ್ಳುಂಡೆ ಮುಂತಾದ ಉಂಡೆಗಳನ್ನು ಮಾಡಿ ನಾಗಪ್ಪನಿಗೆ ನೈವೇದ್ಯ ಮಾಡಬೇಕು. ಈ ಸಮಯದಲ್ಲಿ ಹೆಣ್ಣು ಮಕ್ಕಳು ತವರು ಮನೆಗೆ ಬಂದು ನಾಗಪ್ಪನ ಪೂಜೆಯಲ್ಲಿ ಭಾಗವಹಿಸುವದು ವಿಶೇಷ... ನಾಗ ಚೌತಿಯ ದಿನ  ಹೆಣ್ಣು ಮಕ್ಕಳು ಉಪವಾಸ ಮಾಡಬೇಕು  ಯಾಕೆಂದರೆ ನಾವು.  ಮಾಡಿದ ಉಪವಾಸದ ಮಹತ್ವವೆಂದರೆ  ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ  ಚೌತಿಯಲ್ಲಿ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಇದರಿಂದ ನಾಗದೇವತೆಗಳು ಮರಳಿ...

Adhika Masa Mahatme

 ಅಧಿಕಮಾಸದ ಮಹತ್ತ್ವ ಅಧಿಕಮಾಸ ಎಂದರೇನು ? ಯಸ್ಮಿನ್ ಮಾಸಿ ನ ಸಂಕ್ರಾಂತಿಃ ಸಂಕ್ರಾಂತಿದ್ವಯಮೇವ ಚ | ಮಲಮಾಸಃ ಸ ವಿಜ್ಞೇಯಃ ಮಾಸಃ ಸ್ಯಾತ್ತು ತ್ರಯೋದಶಃ ||                   - ಕಾಠಕಗೃಹ್ಯಸೂತ್ರ ಚಾಂದ್ರೋ ಮಾಸೋ ಹ್ಯಸಂಕ್ರಾಂತೋ ಮಲಮಾಸಃ ಪ್ರಕಿರ್ತಿತಃ  ||           - ಬ್ರಹ್ಮಸಿದ್ಧಾಂತ( ಸ್ಮೃತಿ ಮುಕ್ತಾವಳಿ ) ಯಾವಚಾಂದ್ರಮಾಸದಲ್ಲಿ ಸಂಕ್ರಮಣವೇ ಬರುವುದಿಲ್ಲವೋ ಅಥವ ಎರಡು ಸಂಕ್ರಾಂತಿಗಳು. ಬರುತ್ತವೆಯೋ ಅಂತಹ ಚಾಂದ್ರಮಾಸಕ್ಕೆ ಮಲಮಾಸ(ಅಧಿಕಮಾಸ) ಎಂದು ಹೆಸರು . ಈ ವಿಷಯವನ್ನು ಕಾಠಕಗೃಹ್ಯಸೂತ್ರದಲ್ಲಿ ಹೇಳಿದ್ದಾರೆ. ಯಾವ ತಿಂಗಳಲ್ಲಿ ಸಂಕ್ರಾಂತಿಯೇ ಇಲ್ಲವೋ ಅದನ್ನು ಮಲಮಾಸ ಅಂದರೆ ಅಧಿಕಮಾಸ ಎಂದು ತಿಳಿಯಬೇಕು. ಸಾಧರಣವಾಗಿ ಒಂದು ವರ್ಷಕ್ಕೆ ಹನ್ನೆರಡು ತಿಂಗಳುಗಳೇ ಇದ್ದರೂ ಅಧಿಕಮಾಸ ಬಂದಾಗ ವರ್ಷಕ್ಕೆ ಹದಿಮೂರು ತಿಂಗಳಾಗುತ್ತವೆ ಅಧಿಕಮಾಸವು ಹದಿಮೂರನೆಯ ತಿಂಗಳು ಆಗುತ್ತದೆ . ಹಾಗೇಯೇ ಬ್ರಹ್ಮಸಿದ್ಧಾಂತದಲ್ಲಿ ಹೇಳಿದ್ದಾರೆ .ಸಂಕ್ರಾಂತಿ ಇಲ್ಲದಿರುವ ಚಾಂದ್ರಮಾನ ಮಾಸವನ್ನು ಮಲಮಾಸ .(ಅಧಿಕ ಮಾಸ)ಎಂಬುದಾಗಿ ಹೇಳುತ್ತಾರೆ ಎಂದು ಬ್ರಹ್ಮಸಿದ್ಧಾಂತದಲ್ಲಿ ಹೇಳಿದ್ದಾರೆ . ********* ಮಲ(ಅಧಿಕ)ಮಾಸದ ಅರ್ಥ ಮಲಪಕರ್ಷಣೋ ಮಾಸೋ ಮಲಮಾಸಸ್ತತೋ ಬುಧೈಃ | ನಿರ್ಧಾರಿತೋ ವಸಿಷ್ಠಾಧೈಃ ಪುರಾಣೈರ್ವೇದಚಿಂತಕೈಃ || ಮಲಂ ತು.ಪಾತಕಂ ನಾಮ ಸ್ನಾನದಾನಾದಿದ...

Chaturmasya Mahiti

  ಚಾತುರ್ಮಾಸ ಮನುಷ್ಯಮಾನದ ಒಂದು ವರ್ಷವು ದೇವತೆಗಳಿಗೆ ಒಂದು ದಿನ (ಅಹೋರಾತ್ರ). ಉತ್ತರಾಯಣವು ದೇವತೆಗಳ ಹಗಲು ಮತ್ತು ದಕ್ಷಿಣಾಯಣವು ರಾತ್ರಿ. ಸೂರ್ಯನ ಕರ್ಕರಾಶಿ ಪ್ರವೇಶದೊಂದಿಗೆ ದಕ್ಷಿಣಾಯಣವು ಪ್ರಾರಂಭವಾಗುತ್ತದೆ. ದಕ್ಷಿಣಾಯಣವು ಆರು ತಿಂಗಳುಗಳ ಕಾಲವಿರುತ್ತದೆ. ಈ ಕರ್ಕಮಾಸದಲ್ಲಿ ಬರುವ ಆಷಾಢ ಶುಕ್ಲ ಏಕಾದಶೀಯಿಂದ ನಾಲ್ಕು ತಿಂಗಳುಗಳಷ್ಟು ಕಾಲವನ್ನು ದೇವತೆಗಳು ನಿದ್ರಿಸುವ ಸಮಯವೆಂದು ಕರೆಯಲಾಗಿದೆ. ಈ ನಾಲ್ಕು ತಿಂಗಳುಗಳ ಕಾಲ ಆಚರಿಸಲಾಗುವ ವ್ರತವನ್ನು ಚಾತುರ್ಮಾಸ ವ್ರತವೆಂದು ಕರೆಯಲಾಗುತ್ತದೆ. ಚಾತುರ್ಮಾಸವು ಆಷಾಡ ಶುಕ್ಲ ಏಕಾದಶೀಯಿಂದ ಆರಂಭವಾಗುತ್ತದೆ ಮತ್ತು ಕಾರ್ತಿಕ ಶುಕ್ಲ ಏಕಾದಶೀ ಅಥವಾ ಪೌರ್ಣಮೆಯಂದು ಸಮಾಪನಗೊಳ್ಳುತ್ತದೆ.  ಆಷಾಢ ಶುಕ್ಲ ಏಕಾದಶೀಯಂದು ದೇವದೇವೋತ್ತಮನಾದ ಶ್ರೀಹರಿಯು ಕ್ಷೀರಸಾಗರದಲ್ಲಿ ಯೋಗನಿದ್ರೆಯಲ್ಲಿ ತೊಡಗುವುದರ ಪ್ರತೀಕವಾಗಿ ಹರಿಶಯನೋತ್ಸವ ಅಥವಾ ವಿಷ್ಣುಶಯನೋತ್ಸವವನ್ನು ಆಚರಿಸಲಾಗುತ್ತದೆ. ಈ ಏಕಾದಶೀಯನ್ನು ಶಯನೀ ಏಕಾದಶೀಯೆಂದು ಕರೆಯಲಾಗುತ್ತದೆ. ಕಾರ್ತೀಕ ಮಾಸದ ಶುಕ್ಲೈಕಾದಶೀಯಂದು ಪರಮಾತ್ಮನು ನಿದ್ರೆಯಿಂದ ಎಚ್ಚರಗೊಳ್ಳುವುದರಿಂದ ಅಂದು ಜಾಗರೋತ್ಸವ ಅಥವಾ ಪ್ರಬೋಧೋತ್ಸವವನ್ನು ಆಚರಿಸಲಾಗುತ್ತದೆ. ಈ ಏಕಾದಶೀಯನ್ನು ಉತ್ಥಾನ ಏಕಾದಶೀ ಅಥವಾ ಪ್ರಬೋಧಿನಿ ಏಕಾದಶೀ ಎಂದು ಕರೆಯಲಾಗುತ್ತದೆ.  ಚಾತುರ್ಮಾಸ ವ್ರತ ಎಲ್ಲರಿಗೂ ವಿಹಿತ- ಚಾತುರ್ಮಾಸ ವ್ರತವು ಮಹಾಪುಣ್ಯಪ್ರದವಾಗಿದ್ದು ಇದರ ಆಚರಣೆಯಿ...

Yagnopavitha

   """"""""" ಯಜ್ಞೋಪವೀತ (ಜನಿವಾರ)"""''"" ತಲೆತಲಾಂತರದಿಂದ ಬ್ರಾಹ್ಮಣ ಗಳಿಸುತ್ತಿರುವ ಯಶಸ್ಸಿನ ಗುಟ್ಟು ಬಯಲು. ಅದುವೇ ಯಜ್ಞೋಪವೀತ ಧಾರಣೆ: ಯಜ್ಞೋಪವೀತಕ್ಕೆ ಉಪವೀತ, ಯಜ್ಞಸೂತ್ರ, ವ್ರತಬಂಧ, ಬಲಬಂಧ, ಮೊನೀಬಂಧ ಹಾಗೂ ಬ್ರಹ್ಮಸೂತ್ರ ಎಂಬ ಹಲವಾರು ಹೆಸರುಗಳಿವೆ. ಕನ್ನಡದಲ್ಲಿ ಯಜ್ಞೋಪವೀತಕ್ಕೆ ಜನಿವಾರವೆಂದು ಕರೆಯುತ್ತಾರೆ. ಯಜ್ಞೋಪವೀತವನ್ನು ಧರಿಸುವ ಪರಂಪರೆ ಬಹಳ ಪ್ರಾಚೀನವಾದದ್ದು. ಉಪನಯನದ ಅನಂತರ ಯಜ್ಞೋಪವೀತವನ್ನು ಧರಿಸಲಾಗುತ್ತದೆ. "ಉಪನಯನ" ಎಂದರೆ ಹತ್ತಿರಕ್ಕೆ ತರುವುದು. ಯಾರ ಹತ್ತಿರ? ಎಂದರೆ ಬ್ರಹ್ಮಜ್ಞಾನದ ಹತ್ತಿರ. ಹಿಂದೂ ಧರ್ಮದ ಷೋಡಶ ಸಂಸ್ಕಾರಗಳಲ್ಲಿ ಉಪನಯನವೂ ಒಂದು. ಉಪನಯನ ಸಂಸ್ಕಾರದಲ್ಲಿ ಯಜ್ಞೋಪವೀತದ ಧಾರಣೆಯಾಗುತ್ತದೆ. ಉಪನಯನಕ್ಕೆ "ಯಜ್ಞೋಪವೀತ ಸಂಸ್ಕಾರ" ಎಂಬ ಹೆಸರೂ ಇದೆ. ಮುಂಡನ ಹಾಗೂ ಪವಿತ್ರ ಜಲದಲ್ಲಿ ಸ್ನಾನ ಉಪನಯನ ಸಂಸ್ಕಾರದ ಅಂಗಗಳಾಗಿವೆ. ಯಜ್ಞೋಪವೀತವನ್ನು ಧರಿಸಿದ ವ್ಯಕ್ತಿ ಅನೇಕ ನಿಯಮಗಳನ್ನು ಅನಿವಾರ್ಯವಾಗಿ ಪಾಲಿಸಲೇ ಬೇಕಾಗುತ್ತದೆ. ಒಂದು ಸಲ ಜನಿವಾರವನ್ನು ಧರಿಸಿದ ಮೇಲೆ ಯಾವುದೇ ಕಾರಣಕ್ಕೂ ಜನಿವಾರವನ್ನು ಧರಿಸದೇ ಬಿಡುವಂತಿಲ್ಲ. ಜನಿವಾರ ಹಳೆಯದಾದರೆ, ಅದನ್ನು ವಿಸರ್ಜಿಸಿ ಕೂಡಲೇ ಹೊಸ ಜನಿವಾರವನ್ನು ಧರಿಸ ಬೇಕಾಗುತ್ತದೆ. ಆದರೆ ಜನಿವಾರವನ್ನು ಧರಿಸಿದ ಮೇಲೆ ಅದರ ನಿಯಮಗಳನ್ನ...

Dhanur Masa Mahatme

 ಧನುರ್ಮಾಸದ ಮಹತ್ವ  ಮಾರ್ಗಶಿರ ಮಾಸದಲ್ಲಿ ಧನುರಾಶಿಗೆ ಸೂರ್ಯನು ಪ್ರವೇಶಿಸುವನು.ಧನುರಾಶಿಗೆ ಸೂರ್ಯನ ಪ್ರವೇಶವನ್ನು ಧನುರ್ಮಾಸ ಎನ್ನಲಾಗಿದೆ.ದೇವತೆಗಳಿಗೆ ದಕ್ಷಿಣಾಯಣವು ರಾತ್ರಿಯಾಗಿದೆ .ಉತ್ತರಾಯಣವು ಹಗಲಾಗಿದೆ.ಉತ್ಥಾನದ್ವಾದಶಿಯಂದು ಎದ್ದ ಭಗವಂತನಿಗೆ ಧನುರ್ಮಾಸವು ಅರುಣೋದಯ ಕಾಲವಾಗಿದೆ.ದೇವತೆಗಳು ಅರುಣೋದಯಕಾಲದಲ್ಲಿ ಭಗವಂತನಿಗೆ   (ಹುಗ್ಗಿ )ಮುದ್ಗಾನ್ನ  ವನ್ನು ನಿವೇದಿಸುವರು  ಧನುರ್ಮಾಸದಲ್ಲಿ ದೇವರಿಗೆ ಮುದ್ಗಾನ್ನ (ಹುಗ್ಗಿ)ನೈವೇದ್ಯದ ಮಹತ್ವ ನೀವೇದಯನ್  ಮೇ  ಮುದ್ಗಾನ್ನಂ ಸ ವೈ ಭಾಗವತೋತ್ತಮಃ ಕೋದಂಡಸ್ಥೆ  ಸವಿತರಿ ಮುದ್ಗಾನ್ನಂ ಯೋ ನಿವೇದಯೇತ್ ಸಹಸ್ರವಾರ್ಷಿಕೀ ಪೂಜಾ ದಿನೈನೈಕೇನ ಸಿದ್ಢ್ಯತಿ ಧನುರ್ಮಾಸದಲ್ಲಿ ಯಾರು ಒಂದು ತಿಂಗಳ ಕಾಲ ,ಅರಣೋದಯದಲ್ಲಿ ಎದ್ದು ಸ್ನಾನಾದಿಗಳನ್ನು ಮಾಡಿ  ಹುಗ್ಗಿಯ ನೈವೇದ್ಯವನ್ನು ಮಾಡಿ ಭಗವಂತನನ್ನು ಪೂಜಿಸುವನೊ ಅವನು ಭಾಗವತೋತ್ತಮನೆನಿಸುವನು .ಈ ಪೂಜೆಯಿoದ ಪೂಜಕನಿಗೆ ಸಾವಿರವರ್ಷ ಪೂಜಾಫಲವು ಲಭಿಸುತ್ತದೆ. ಮುಖ್ಯಾ ಅರುಣೋದಯೇ ಪೂಜಾ ,ಮಧ್ಯಮಾ ಲುಪ್ತಕಾರಕಾ ಅಧಮಾ ಸೂರ್ಯಸಹಿತಾ ಮದ್ಯಾಹ್ನೇ ನಿಷ್ಫಲಾ ಭವೇತ್ ಧನುರ್ಮಾಸದ ಪೂಜಾ ಸಮಯ ಧನುರ್ಮಾಸ ಪೂಜೆಯು ಅರುಣೋದಯ ಕಾಲದಲ್ಲಿ  ಆಚರಿಸುವುದು ಉತ್ತಮ ಪಕ್ಷವಾಗಿದೆ. ನಕ್ಷತ್ರಗಳು ಕಾಣಿಸದ ಸ್ವಲ್ಪ ಮುoಜಾನೆಯಲ್ಲಿ ಮಾಡಿದ ಪೂಜೆಯು . ಮಧ್ಯಮವಾಗಿದೆ .ಸೂರ್ಯೋದಯವಾದ ಮೇಲೆ  ಮಾಡಿದ ಪೂ...

Dhanvantri Mahatme

" ಶ್ರೀ ಧನ್ವಂತರೀ ಸ್ತುತಿ " ಶ್ರೀಮದ್ಭಾಗವತ... ಧನ್ವಂತರೀ ದೀರ್ಘತಮಸ ಆಯುರ್ವೇದ ಪ್ರವರ್ತಕಃ । ಯಜ್ಞಭುಗ್ವಾಸುದೇವಾಂಶ: ಸ್ಮೃತಿಮಾತ್ರಾತ್ರಿ ನಾಶನಃ ।। ದೀರ್ಘ ತಮಸ್ ಎಂಬುವನಿಂದ " ಧನ್ವ " ನೆಂಬಾತ ಹುಟ್ಟಿದ. ಈ ಧನ್ವನ ಮಗನಾಗಿ ಆಯುರ್ವೇದ ಪ್ರವರ್ತಕನೂ; ಸರ್ವ ಯಜ್ಞ ಭೋಕ್ತನೂ; ವಾಸುದೇವಾಂಶನಾದವನೂ; ತನ್ನ ಸ್ಮಾರಣೆ ಮಾತ್ರದಿಂದಲೇ ರೋಗಾದಿ ಸಕಲ ದುಃಖ ನಾಶಕನಾದ "ಧನ್ವಂತರೀ " ದೇವನು ಅವತರಿಸಿದನು! ಈ ವಿಷಯವು " ಹರಿವಂಶ " ದಲ್ಲಿ... ಧನ್ವಸ್ತು ದೀರ್ಘತಮಸಃ ವಿದ್ವಾನ್ ಧನ್ವಂತರೀಸ್ತತಃ ।। ಶ್ರೀ ದುರ್ವಾಸರ ಶಾಪದಿಂದ ಇಂದ್ರಾದಿ ದೇವತೆಗಳು ದೈತ್ಯರಿಂದ ಪರಾಜಿತರಾಗಿ ಶ್ರೀ ಚತುರ್ಮುಖ ಬ್ರಹ್ಮದೇವರನ್ನು ಮೊರೆಹೊಕ್ಕರು. ಶ್ರೀ ಚತುರ್ಮುಖ ಬ್ರಹ್ಮದೇವರು ದೇವತೆಗಳೊಂದಿಗೆ ಶ್ರೀ ಹರಿಯನ್ನು ಮೊರೆಹೊಕ್ಕು ಪ್ರಾರ್ಥಿಸಿದಾಗ.. " ಅಹಿ - ಮೂಷಕ " ನ್ಯಾಯವನ್ನು ಅನುಸರಿಸಿ ದೈತ್ಯರೊಂದಿಗೆ ಸಂಧಿ ಮಾಡಿಕೊಂಡು ಸಮುದ್ರ ಮಥನ ಮಾಡಲು ಶ್ರೀ ಹರಿ ಆದೇಶಿಸಿದನು. ಶ್ರೀ ಹರಿಯ ಆದೇಶಾನುಸಾರ ಅಮೃತಕ್ಕಾಗಿ ಮಂದರ ಪರ್ವತವನ್ನು ಕಡಗೋಲನ್ನಾಗಿಯೂ; ವಾಸುಕಿಯನ್ನು ಹಗ್ಗವನ್ನಾಗಿ ಮಾಡಿಕೊಂಡು ಕ್ಷೀರ ಸಮುದ್ರವನ್ನು ದೇವ - ದೈತ್ಯರು ಒಟ್ಟಾಗಿ ಶ್ರೀ ಹರಿಯೊಂದಿಗೆ ಮಥಿಸಿದಾಗ.. ಕಾಲಕೂಟ ವಿಷ ಕಾಮಧೇನು ಉಚೈಶ್ರವಸ್ ಐರಾವತ ಪಾರಿಜಾತ ಅಪ್ಸರೆಯರು ಶ್ರೀ ಮಹಾಲಕ್ಷ್ಮೀದೇವಿಯರು ಕ್ರಮವಾಗಿ ಪ್ರಾದುರ್ಭೂತರಾದರು. ...

Shraddha Mahatwa

 " ಶ್ರಾದ್ಧದ ಮಹತ್ವ " " ಶ್ರಾದ್ಧ  " ಯೆಂದರೆ... " ಶ್ರದ್ಧಯಾ ಕ್ರೀಯತೇ ಕರ್ಮ ಇತಿ ಶ್ರಾದ್ಧಮ್ " - ಶ್ರದ್ಧೆಯಿಂದ ಆಚರಿಸುವ ಕಾರ್ಯವೇ " ಶ್ರಾದ್ಧ " ಎಂದು ಕರೆಸಿಕೊಳ್ಳುತ್ತದೆ. ಅತ್ಯಂತ ನಿಷ್ಠೆಯಿಂದ ಪಿಂಡ ಪ್ರದಾನ ಮಾಡಿ ಪಿತೃ ದೇವತೆಗಳ ಅಂತರ್ಯಾಮಿಯಾದ ಶ್ರೀ ಜನಾರ್ದನ ರೂಪಿ ಭಗವಂತನನ್ನು ತೃಪ್ತಿ ಪಡಿಸಬೇಕು. ಇದರಿಂದ ತನ್ನ ಪಿತೃಗಳಿಗೆ ಸದ್ಗತಿಯು ದೊರೆಯಲಿದೆಯೆಂದು ಪ್ರಾರ್ಥಿಸಬೇಕು. ಕರ್ಮಭೂಮಿ ಯೆನಿಸಿದ ಈ ಭರತ ಖಂಡದ ಸನಾತನ ಧರ್ಮಗಳಲ್ಲಿ " ಶ್ರಾದ್ಧ " ಕರ್ಮವು ಮುಖ್ಯವಾಗಿದೆ. ಇದು ಅತ್ಯಂತ ಶ್ರೇಯಸ್ಕರವಾದ ಕರ್ಮವಾಗಿದೆ. ಇದನ್ನು " ಪಿತೃ ಯಜ್ಞ " ಎಂದು ಕರೆಯುತ್ತಾರೆ. " ಬ್ರಹ್ಮಾಂಡ ಪುರಾಣ " ದಲ್ಲಿ... ಪಿತೃನ್ಯೂದ್ಧಿಶ್ಯ ವಿಪ್ರೇಭ್ಯೋ ದತ್ತಾಂ ಶ್ರಾದ್ಧಮುದಾಹೃತಮ್ ।। ನಮ್ಮ ಜನ್ಮಕ್ಕೆ ಕಾರಣರಾಗಿ, ನಮ್ಮನ್ನು ಹೆತ್ತು - ಹೊತ್ತು - ಸಾಕಿ - ಸಲುಹಿ ನಮ್ಮ ಉದ್ಧಾರಕ್ಕೆ ಶ್ರಮಿಸಿ, ನಮ್ಮನ್ನಗಲಿ ಹೋದ ತಂದೆ - ತಾಯಿ - ಹಿರಿಯರು ಮುಂತಾದವರನ್ನು ಸ್ಮರಿಸಿ, ಅವರನ್ನು ಕುರಿತು ಶ್ರದ್ಧೆಯಿಂದ ಅನ್ನ - ಜಲಾದಿಗಳನ್ನು ಕೊಡುವ ಪಿತೃ ಕಾರ್ಯಕ್ಕೆ " ಶ್ರಾದ್ಧ " ಎಂದು ಹೆಸರು.   " ಶ್ರಾದ್ಧ ಕಲ್ಪಲತಾ " ದಲ್ಲಿ.... ಪಿತೃನುದ್ಧಿಶ್ಯೇನ ಶ್ರದ್ಧಯಾ ತ್ಯಕ್ತಸ್ಯ ದ್ರವ್ಯಸ್ಯ । ಬ್ರಾಹ್ಮಣೈರ್ಯತ್ಸ್ವೀಕರಣಂ ತತ್ ಶ್ರಾದ್ಧಮ್ ।। ಪ...

GARUDADRI NARASIMHA SULADI

  ಶ್ರೀ ಪುರಂದರದಾಸಾರ್ಯ ವಿರಚಿತ   ಗರುಡಾದ್ರಿ ನರಸಿಂಹ ದೇವರ ಸುಳಾದಿ   ರಾಗ : ಸಾವೇರಿ   ಧೃವತಾಳ  ಅಂಜುವೇ ನಾ ನೀ ಸಿಂಗದ ಮುಖದವ  ಹುಂಕರಿಸುವಿ ಮರೆದೊಮ್ಮೆಮ್ಮೆ ಅಂಜುವೇ ನಾ ನೀ ತ್ಯೆರವಾಯ ತೆರವುತ ಗದ್ಗಹಿಸುವಿ ಮರೆದೊಮ್ಮೆಮ್ಮೆ ಅಂಜುವೇ ನಾ ನೀ ಘುಡುಘುಡಿಸುತ ಕಿಡಿಗಳ್ಯರಗಿಸುವೆ ಒಮ್ಮೆಮ್ಮೆ ಅಂಜುವೆ ನಾ ನೀ ಕಿವಿಯನುಳುಪಿ ಮೇಲೆ ಕವಿದೆರಗುವಿ ಮರೆದೊಮ್ಮೆಮ್ಮೆ ಅಂಜುವೇ ನಾ ನೀ ಸಿರಿ ಮುದ್ದು ನರಸಿಂಹ  ಪುರಂದರವಿಠ್ಠಲ ನೀ ಉರಿಮಾರಿ ದೈವವೆಂದಜುವೆ ॥೧॥  ಮಟ್ಟತಾಳ  ಹಿರಣ್ಯಕಶಿಪುವಿನ್ನ ಉದರ ಬಗಿದ ಬಳಿಕ ಕರುಳು ಮಾಲಿ ತೆಗೆದು ಕೊರಳೊಳಿಟ್ಟ ಬಳಿಕ ಉರಿಯನುಗುಳುವೇತಕೆ ಸಿರಿಯ ನುಡಿಸದ್ಯಾತಕೆ ಹರ ಬೊಮ್ಮಾದಿಗಳ ಸರಕು ಮಾಡಿದಿದ್ದ್ಯಾತಕೆ ಸಿರಿ ಮುದ್ದು ನರಸಿಂಹ ಪುರಂದರವಿಠ್ಠಲ  ಪ್ರಹ್ಲಾದದೇವ ಬಂದರೆ ತೆಗೆದು ಮುದ್ದಾಡಿದ್ಯಾತಕೆ ॥೨॥  ತ್ರಿವಿಡಿತಾಳ  ಅಟ್ಟಹಾಸ ಕಬುಜಜಾಂಡ ಕಟ್ಟಹ ಪ್ರತಿಧ್ವನಿಯಗೊಡುತಿರೆ ಮೆಟ್ಟಿದಿಳೆ ತಲೆ ಕೆಳಗಾಗುತಲಿರೆ ಬೆಟ್ಟಗಳುರಳುರಳಿ ಬೀಳುತಿರೆ ಅಷ್ಟದಿಕ್ಕುಗಳಂ ಬೆಳಗುತಿರೆ ದಿಟ್ಟ ಮುದ್ದು ನರಸಿಂಹ ಪುರಂದರ -  ವಿಠ್ಠಲ ನಿನಗೆದಿರಾರೀ ಜಗದೊಳು ॥೩॥  ಅಟ್ಟತಾಳ  ಉರಿಮಾರಿ ಸಾಗರಗಳು ಸುರಿಯೆ ನಾಲಿಗೆಯಿಂದ ಚರಾಚರಂಗಳು ಚಾರಿವರಿವುತಲಿರೆ ಬ್ರಹ್ಮಾಂಡ ಒಂದೆ ಸಿಡಿದು ಹೋಗುತ್ತಿತ್ತು ಬ್ರಹ್ಮ ಪ್ರಳಯ ವಂದಾಗಿ ಪೋಗ...

ENU SUKRUTAVA MADIDALO

ಏನು ಸುಕೃತವ ಮಾಡಿದಳೋ ತಾ ಯಶೋದೆ ಶ್ರೀನಿಧಿಯಾದ ಕೃಷ್ಣನ್ನ ಕರೆದು ಮುದ್ದಿಸುವಳಂತೆ || ಪ ||  ಗಂಗಾಜನಕನಿಗೆ ಗಡಿಗೆ ನೀರೆರೆವಳಂತೆ | ಮಂಗಳಾಂಗಗೆ ಭಾಮೆ ಶೃಂಗರಿಸುವಳಂತೆ |  ತುಂಗ ಭೂಧರನ್ನ ತೊಟ್ಟಿಲೊಳು ತೂಗುವಳಂತೆ | ಕಂಗಳಿಗಗೋಚರನ ಕರೆದಪ್ಪಿಕೊಂಬಳಂತೆ || 1 ||  ನಗವನೆತ್ತಿದವನ ಮಗುವೆಂದೆತ್ತುವಳಂತೆ | ನಿಗಮಗೋಚರನ ತಾ ನಿಟ್ಟಿಪಳಂತೆ |  ಅಗಣಿತ ಸತ್ವನ್ನ ಹಗ್ಗದಿ ಕಟ್ಟುವಳಂತೆ | ಮಿಗೆ ನಿತ್ಯತೃಪ್ತಗೆ ಪಾಲನೆರೆವಳಂತೆ || 2 ||  ಬಹುಮುಖನಿಗೆ ಭಾಮೆ ಮುದ್ದುಕೊಡುವಳಂತೆ ಅಹಿತಲ್ಪನಿಗೆ ಹಾವ ತುಳಿದೀಯೆಂಬಳಂತೆ |  ಮಹಾದೈತ್ಯದಲ್ಲಣನಿಗೆ ಬಹು ಭಯವ ತೋರುವಳಂತೆ | ಮಹಿಮ ನರಸಿಂಹಗೆ ಗುಮ್ಮನ ತೋರುವಳಂತೆ || 3 ||  ಚತುರ್ಮುಖಪಿತನ ಸುತನೆಂದೆತ್ತುವಳಂತೆ | ಶ್ರುತಿವಿನುತಗೆ ಜೋಗುಳ ಪಾಡುವಳಂತೆ |  ಶತರವಿತೇಜಗಾರತಿಯನೆತ್ತುವಳಂತೆ | ಗತಭೀತನಿಗೆ ಭಾಮೆ ರಕ್ಷೆಯಿಕ್ಕುವಳಂತೆ || 4 ||  ಕಡೆಗೋಲ ನೇಣ ಕೈಯಲಿ ಪಿಡಿದೊಲವಿಂದ | ಪಡುಗಡಲತಡಿಯ ದ್ವಾರಕೆನಿಲಯ | ಬಿಡದೆ ನೆಲೆಸಿದ ಹಯವದನ ಮುದ್ದು | ಉಡುಪಿನ ಕೃಷ್ಣನ ಉಡಿಯೊಳೆತ್ತುವಳಂತೆ || 5 || 

NENEVEANUDINA NEELANEERADA

ನೆನೆವೆನನುದಿನ ನೀಲನೀರದ ವರ್ಣನ ಗುಣ ರನ್ನನ || ಪ|| ಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ||ಅಪ|| ದೇವಕೀ ಜಠರೋ ದಯಾಂಬುಧಿ ಚಂದ್ರನ – ಗುಣ ಸಾಂದ್ರನ ಗೋವಜ್ರಕೆ ಘನ ಯಮುನೆ ದಾಟಿ ಬಂದನ – ಅಲ್ಲಿ ನಿಂದನ ಮಾವ ಕಳುಹಿದ ಮಾಯಾ ಶಟವಿಯ ಕೊಂದನ – ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ – ಶ್ರುತಿ ಸಿದ್ಧನ||1|| ಗೋಕುಲದ ಗೋಪಿಯರ ವಂಚಕ ಚೋರನ – ಬಹು ಧೀರನ ಅನೇಕ ನಾರಿಯರ್ವಸನವನು ಕದ್ದೊಯ್ದನ – ತುರುಗಾಯ್ದನ ನಾಕಿಯರಿಗರಿ ಧೇನುಕ ವತ್ಸವಿ ಘಾತನ – ವಿಖ್ಯಾತನ ಕಾಕುಮತಿ ಕಾಳಿಂಗನ ಫಣ ತುಳಿದನ – ಅವಗೊಲಿದನ||2|| ಶೈಲವನು ಅಹಿ ಶಯನ ಬೆರಳಲಿ ಆಂತನ – ಬಲವಂತನ ಸೋಳ ಸಾಸಿರ ಬಾಲೆಯರ ಕರ ಪಿಡಿದನ – ಸುಧೆಗುಡಿದನ ಬಾಲೆ ಭಾಮೆಯರೊಡನೆ ಜಲಕ್ರೀಡೆ ಗಿಳಿದನ – ಅಲ್ಲಿ ನಲಿದನ ಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ – ಸಂತುಷ್ಟನ||3|| ಕ್ರೂರ ಬಕ ಕೇಶಿಗಳನ್ನೆಲ್ಲ ಸೀಳ್ದನ – ಸುರರಾಳ್ವನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ – ಸುರವಂದ್ಯನ ನಾರಿ ಕಬುಜೆಗೆ ಭೂರಿ ಸಂತಸವಿತ್ತನ – ಅತಿಶಕ್ತನ ವಾರಣವನು ಕೆಡಹಿದ ಪ್ರತಿಮಲ್ಲನ – ಅತಿ ಚೆಲ್ವನ||4|| ಸುಲಭದಿಂದಲಿ ಶಿವನ ಧನುವನು ಮುರಿದನ – ನೆರೆ ಮೆರೆದನ ಮಲೆತ ಮಲ್ಲರ ಕೆಡಹಿ ರಂಗದಿ ನಿಂತನ – ಜಯವಂತನ ಖಳ ಕುಲಾಗ್ರಣಿ ಕಂಸನೆಂಬನ ಹೊಡೆದನ – ಹುಡಿಗೆಡೆದನ ಬಲದಿ ತಾಯಿ ತಂದೆ ಬಂಧನ ಕಡಿದನ – ಯಶ ಪಡೆದನ||5|| ಭುವನ ಪಟ್ಟವನುಗ್ರಸೇನಗೆ ಕೊಟ್ಟನ – ಅತಿ ಶ್ರೇಷ್ಠನ ಯುವತಿಯರಿಗುದ್ಧವನ ಕಳುಹಿದ ಜಾಣನ – ಸುಪ...

HARI HARA SULADI

ಪುರಂದರದಾಸರ ರುದ್ರದೇವರ ಕುರಿತ ಸುಳಾದಿ ಧ್ರುವ ತಾಳ ಶಿವನೆ ದುರ್ವಾಸ ಕಾಣಿರೊ ಶಿವನೆ ಶುಕಯೋಗಿ ಕಾಣಿರೊ | ಶಿವನೆ ಅಶ್ವತ್ಥಾಮ ಕಾಣಿರೊ | ಶಿವಗುತ್ಪತ್ತಿಯಿಲ್ಲ ಎಂಬರನೆ ನೆಂಬೆನಯ್ಯ | ಶಿವನಾದಿಯಲ್ಲಿ ಬೊಮ್ಮನ ಸುತ | ಬೊಮ್ಮನಾದಿಯಲಿ ಅಚ್ಚ್ಯುತನ ಸುತÀ | ಪುರಂದರವಿಠಲನೊಬ್ಬನೆ ಅಜಾತನಾಗಿಯೂ ಜಾತನಾಗಿ ಇರುತಿಪ್ಪ ||1|| ಮಟ್ಟತಾಳ ಹರಿಶಂಕರರೊಳಗೆ ಉತ್ತಮರಾರೆಂದು | ಪರೀಕ್ಷಿಸಬೇಕೆಂದು ಆದಿಯ ಯುಗದಲ್ಲಿ | ಸರಸಿಜ ಸಂಭವ ಸುರಪತಿಯಾದಿ ಸುರರು | ಸಾರಂಗ ಪಿನಾಕಿಗಳಿಂದೆಚ್ಚಾಡಿರೆನಲು | ಹರಿ ಸಾರಂಗವನೆತ್ತಿದ ಏರಿಸಿದ ಶಂ- ಕರ ನಿಶ್ಚೇಷ್ಟಿತನಾಗಿದ್ದ ಕಾಣಿರೂ | ಹರಿಯಾಡಿಸಲಾಡುವರಜ ಭವಾದಿಗಳು ಸಿರಿ ಪುರಂದರ ವಿಠಲನೆ ಸರ್ವೋತ್ತಮ ಕಾಣಿರೋ ||2|| ರೂಪಕತಾಳ ಜನಕನ ಮನೆಯಲ್ಲಿ ಮುರಿಸಿಕೊಂಡ ಬಿಲ್ಲು | ಶಿವನ ಬಿಲ್ಲೆಂದರಿಯಿರೊ ಹರನ ಬಿಲ್ಲೆಂದರಿಯಿರೊ | ಸುರಾಸುರರ ಭಂಗ ಬಡಿಸಿ ಬಿದ್ದ ಬಿಲ್ಲು | ಸಿರಿ ಪುರಂದರ ವಿಠಲ ಶ್ರೀರಾಮ ಮುರಿದ ಬಿಲ್ಲು ||3|| ಅಟ್ಟತಾಳ ಬಾಣಾಸುರನ ಭಕುತಿಗೊಲಿದು ಬಂದು | ಅವನ ಬಾಗಿಲ ಕಾಯ್ದುದಿಲ್ಲವೆ ಶಿವನು | ಬಾಹು ಸಹಸ್ರವ ಕಡಿಯುವಾಗ | ಬೇಕು ಬೇಡೊಂದೊಮ್ಮೆ ಎಂದನೆ ಶಿವನು | ಪುರಂದರವಿಠಲ ಪರದೈವವೆಂದರಿತ ಕಾರಣ | ಒಪ್ಪಿಸಿಯೇ ಕೊಟ್ಟಾ ಶಿವನು ||4|| ತ್ರಿವುಡೆತಾಳ ವಿಷ್ಣು ಸಹಸ್ರ ನಾಮಗಳ ಶಿವ ಜಪಿಸಿ ಉಪದೇಶಿಸುವ ಗೌರಿಗೆ | ವಿಷ್ಣು ಸಹಸ್ರನಾಮಗಳ ಸಮ ರಾಮರಾಮೆಂದು ಭಕ್ತಿ ಭರದಲಿ | ವಿಷ್ಣು ಪುರಂದರವಿಠಲ ರಾಯನ ಅತ್ಯಧಿಕ ಪ್ರಿಯ...

SRI LAKSHMI HRUDAYA STOTRA PADA

LAKSHMI HRUDAYA STOTRA BY GURUJAGANATHA DASARU ಶ್ರೀ ಮನೋಹರೆ ಲಕುಮಿ ತವಪದ ತಾಮರಸಯುಗ ಭಜಿಪೆ ನಿತ್ಯದಿ ಸೋಮಸೋದರಿ ಪರಮಮಂಗಳೆ ತಪ್ತಕಾಂಚನಳೇ | ಸೋಮಸೂರ್ಯಸುತೇಜೋರೂಪಳೆ ಹೇಮಸನ್ನಿಭ ಪೀತವಸನಳೆ ಚಾಮೀಕರಮಯ ಸರ್ವಭೂಷಣ ಜಾಲಮಂಡಿತಳೇ, ಭೂಷಣ ಜಾಲಮಂಡಿತಳೇ ||೧|| ಬೀಜಪೂರಿತ ಹೇಮಕಲಶವ ರಾಜಮಾನ ಸುಹೇಮ ಜಲಜವ ನೈಜ ಕರದಲಿ ಪಿಡಿದುಕೊಂಡು ಭಕುತಜನತತಿಗೇ | ಮಾಜದಲೆ ಸಕಲೇಷ್ಟ ನೀಡುವ ರಾಜಮುಖಿ ಮಹದಾದಿವಂದ್ಯಳೆ ಮೂಜಗತ್ತಿಗೆ ಮಾತೆ ಹರಿವಾಮಾಂಕದೊಳಗಿರ್ಪ, ಹರಿವಾಮಾಂಕದೊಳಗಿರ್ಪೆ||೨|| ಶ್ರೀ ಮಹತ್ತರ ಭಾಗ್ಯಮಾನಿಯೇ ಸ್ತೌಮಿ ಲಕುಮಿ ಅನಾದಿ ಸರ್ವ ಸುಕಾಮ ಫಲಗಳನೀವ ಸಾಧನ ಸುಖವಕೊಡುತಿರ್ಪ | ಕಾಮಜನನಿಯೆ ಸ್ಮರಿಪೆ ನಿತ್ಯದಿ ಪ್ರೇಮಪೂರ್ವಕ ಪ್ರೇರಿಸೆನ್ನನು ಹೇ ಮಹೇಶ್ವರಿ ನಿನ್ನ ವಚನವ ಧರಿಸಿ ಭಜಿಸುವೆನು, ಧರಿಸಿ ಭಜಿಸುವೆನು||೩ ಸರ್ವ ಸಂಪದವೀವ ಲಕುಮಿಯೆ ಸರ್ವ ಭಾಗ್ಯವನೀವ ದೇವಿಯೆ ಸರ್ವಮಂಗಳವೀವ ಸುರವರ ಸಾರ್ವಭೌಮಿಯಳೇ | ಸರ್ವ ಜ್ಞಾನವನೀವ ಜ್ಞಾನಿಯೆ ಸರ್ವ ಸುಖಫಲದಾಯಿ ಧಾತ್ರಿಯೆ ಸರ್ವಕಾಲದಿ ಭಜಿಸಿ ಬೇಡಿದೆ ಸರ್ವ ಪುರುಷಾರ್ಥ, ಬೇಡಿದೆ ಸರ್ವ ಪುರುಷಾರ್ಥ || ೪ || ನತಿಪೆ ವಿಜ್ಞಾನಾದಿ ಸಂಪದ ಮತಿಯ ನಿರ್ಮಲ ಚಿತ್ರ ವಾಕ್ಪದ ತತಿಯ ನೀಡುವದೆನಗೆ ಸರ್ವದ ಸರ್ವ ಗುಣಪೂರ್ಣೇ | ನತಿಪ ಜನರಿಗನಂತಸೌಖ್ಯವ ಅತಿಶಯದಿ ನೀನಿತ್ತ ವಾರ್ತೆಯು ವಿತತವಾಗಿಹದೆಂದು ಬೇಡಿದೆ ಭಕ್ತವತ್ಸಲಳೇ, ಬೇಡಿದೆ ಭಕ್ತವತ್ಸಲಳೇ||೫|| ಸರ್ವ ಜೀವರ ಹೃದಯ ವಾಸಿನಿ ಸರ್ವ ಸಾರ ಸುಭ...

MADHAVANANGHRI NITYA VADIRAJARA SULADI

ಮಾಧವನಂಘ್ರಿ ನಿತ್ಯ ಮೋದದಲ್ಲಿ ಭಜಿಪ | ಸಾಧು ಸನ್ಮುನಿವರ್ಯ ಸಮ್ಮೋದತೀರ್ಥರ ಪಾದ | ಸಾದರದಿಂದ ಭಜಿಸಿ ಮೇದಿನಿಗೆ ಭಾರ ವಾದ ಮಾಯಾ ವಾದಿಗಳ ಗೆದ್ದ  ವಾದಿರಾಜರ ಮಹಿಮೆ ವರ್ಣಿಸಲಳವಲ್ಲಾ | ಮಾಧವ  ವೇದವೇದ್ಯ "ವಿಜಯವಿಠಲ" ತಾನು| ಆದರದಿಂದವರ ಭುಜದಿ ಹಯವಕ್ತ್ರನಾಗಿ |  ಪಾದವನ್ನು ಇಟ್ಟು ಸ್ವಾದುವಾದ ಕಡಲಿ ಹೂರಣವನು ಉಂಡ | ಶ್ರೀಧರನ ಮಹಿಮೆ ಸಾಧುಜನರು ಕೇಳಿ || ಕಡಲಲ್ಲಿ ಪವಡಿಸಿದ ಒಡಿಯ ತಾ ಪೊಡವಿಯಲಿ | ಮೃಡನುತ ಗೋವಿಂದ ಜಡಿಥದ್ಹರಿವಾಣದಲಿ | ಕಡಲಿ ಸಕ್ಕರೆ ಬೆರಸಿ ಲಡ್ಡುಗೆಯ ಮಾಡಿದ | ಸಡಗರದ ಭಕ್ಷ ಪಾಯಸ ಘೃತ ನೀಡೆ | ಒಡಿಯನು ಬ್ರಹ್ಮಾದಿ ಪರಿವಾರ ಸಹಿತುಂಡು | ಕಡಗೋಲು ವೇಣು ಪಿಡಿದುಡಿಪಿಲಿನಿಂದ | ಉಡುರಾಜ ಮುಖ ನಮ್ಮ " ವಿಜಯವಿಠ್ಠಲ"ನು | ಬೆಡಗು ಕಾರ್ಯವನ್ನು ನಡೆಸಿದ ಬಗೆ ಕೇಳಿ || ತಾಮಸ ಗುಣವುಳ್ಳ ಪಾಮರ ಜನರಿಗೆ | ಈ ಮಹಿಮೆ ದೊರಕುವದೇ ಸ್ವಾಮಿ ಸಿಲುಕುವನೇ | ಕಾಮಿಸಿ ಕೋಟಿ ವರುಷ ನಾಮ ನುಡಿಯೆ ಪರಂ |  ಧಾಮ ದೊರಿಯದು ಭೂಮಿಯೊಳಗಿದ್ದ ಭ್ರಾಮಕ ಜನರಿಗೆ |  ವಾಮದೇವನೆ ಹಿರಿಯನೆಂದು ಬುದ್ಧಿಯ ಕೊಡುವ | ಕಾಮಾರಿ ವಂದ್ಯ ನಮ್ಮ "ವಿಜಯವಿಠ್ಠಲ"ನು | ಸಾಮಾನ್ಯ ಜನರಿಗೆ ದೊರಕುವನೇ ಕೇಳಿ || ಅಜ ಸತ್ಯಲೋಕಾಧಿಪತ್ಯವನ್ನು ಮಾಡಿ ದಿ- ಗ್ವಿಜಯ ಮಾಡಲು ಪುರಕೆ | ನಿಜ ಸುಜ್ಞಾನ ಪೂರ್ಣಪ್ರಜ್ಞರೆಂಬೊ ಮುನಿಯು | ಅಜನ ಪದಕೆ ಬಂದು ಅಖಿಲರನಾಳಿದಾ | ನಿಜವಾಯು ಹನುಮ ಭೀಮ ಮಧ್ವನೆನಿಸಿದ | ವಿಜಯಸಾರಧಿ ಪಾದ ರಜದ ಮಹಾ...