Posts

Showing posts with the label Sampradaya Haadugalu

PATIYA PADAKKE ERAGI SUDHAMA CHARITRE

ಪತಿಯ ಪಾದಕ್ಕೆರಗಿ ಮತಿ ಬೇಡಿ ಪಾರ್ವತಿ |  ಸುತಗೆ ವಂದನೆಯ ಮಾಡಿದಳು || ಅತಿ ಭಕ್ತಿಯಿಂದಲಿ ಸ್ತುತಿಸುವ ಜನರಿಗೆ ಸ- | ದ್ಗತಿಯಾಗಲೆನುತ ಪೇಳಿದಳು || ೧ || ಸುಧಾಮನೆಂಬೋರ್ವ ಸೂಕ್ಷ್ಮದ ಬ್ರಾಹ್ಮಣ | ಹೊದಿಯಲಿಕ್ಕಿಲ್ಲ ಆಶನವಿಲ್ಲ || ಗದಗದ ನಡುಗುತ ಮಧುರ ಮಾತಾಡುತ | ಸದನದೊಳಿರುತಿದ್ದನಾಗ || ೨ || ಪ್ರಾತಃ ಕಾಲದಲ್ಲೆದ್ದು ನಿತ್ಯ ಕರ್ಮವ ಮುಗಿಸಿ |  ನಾಥನ ಧ್ಯಾನ ಮಾಡುತಲಿ || ಪಾತ್ರರ ಮನೆಗ್ಹೋಗಿ ಯಾಚನೆಗಳ ಮಾಡಿ | ಗ್ರಾಸ ತರುವನು ಮುಷ್ಟಿ ತುಂಬ || ೩ || ಪತಿವೃತೆ ಹೆಂಡತಿ ಪತಿ ತಂದದ್ದೆ ಸಾಕೆಂದು |  ಹಿತದಿಂದ ಪಾಕ ಮಾಡುವಳು || ಅತಿ ಭಕ್ತಿಯಿಂದಲಿ ಪತಿಗೆ ಭೋಜನ ಬಡಿಸಿ |  ಮತಿವಂತಿ ಉಳಿದದ್ದುಂಬುವಳು || ೪ || ಹಸಿವೆ ತೃಷೆಗಳಿಂದ ಅತಿಕ್ಲೇಶವಾಗಿದ್ದು |  ಪತಿಕೂಡೆ ಮಾತನಾಡಿದಳು || ಗತಿಯೇನು ನಮಗಿನ್ನು ಹಿತದವರ‍್ಯಾರಿಲ್ಲ ಸ- | ದ್ಗತಿಯೇನೆನುತ ಪೇಳಿದಳು || ೫ || ಪೊಡವಿಯೊಳಗೆ ನಿಮ್ಮ ಒಡಹುಟ್ಟಿದವರಿಲ್ಲೆ |  ಒಡನೆ ಆಡಿದ ಗೆಳೆಯರಿಲ್ಲೆ || ಕರೆದು ಕೂಡಿಸಿಕೊಂಡು ಬಿರುಸು ಮಾತ್ಹೆಳುವ |  ಹಿರಿಯರು ದಾರಿಲ್ಲೆ ನಿಮಗೆ || ೬ || ಚಿಕ್ಕಂದಿಲ್ಲೋದಿಲ್ಲೆ ಹೆತ್ತವರ‍್ಹೆಳಿಲ್ಲೆ |  ಉತ್ತಮ ಗುರುಗೋಳಿಲ್ಲೆನು ಹೊತ್ತು ವೇಳೆಗಾಗೋ ಮಿತ್ರರು ಯಾರಿಲ್ಲೆ  ಮತ್ತೆ ಕೇಳಿದಳು ಕ್ಲೇಶದಲಿ || ೭ || ಮಡದಿ ಮಾತನು ಕೇಳಿ ಮನದಲಿ ಯೋಚಿಸಿ | ಹುಡುಗನಾಗಿರಲಿಕ್ಕೆ ಹೋಗಿ || ಗುರುಕುಲ ವಾಸದಲಿ ಹರಿ ...
 SHRAVANA SHANIVARADA HADU ಶ್ರಾವಣ ಶನಿವಾರದ ಹಾಡು 🌺🌺🌺🌺🌺🌺 ಗಜವದನನ ಪಾದಾಂಬುಜಗಳಿಗೆರಗುವೆನು ಅಜನರಸಿಗೆ ನಮಸ್ಕರಿಸಿ ತ್ರಿಜಗವಂದಿತ ಲಕ್ಷ್ಮೀನಾರಾಯಣ ಸ್ವಾಮಿ ನಿಜಪತ್ನಿ ಕತೆಯ ವರ್ಣಿಸುವೆ ಅರಸನಾಶ್ರಯವ ಮಾಡೊಂದು ಪಟ್ಟಣದಲ್ಲಿ ಇರುತ್ತಿದ್ದ ಸೋಮೇಶಭಟ್ಟ ಹರುಷದಿಂದಲಿ ಸೊಸೆಯರು ಗಂಡುಮಕ್ಕಳು ಭರಿತವಾದರು ಸುಖದಿಂದ ಆ ಮಹಾಕ್ಷೀರಸಾಗರದಲ್ಲಿ ಜನಿಸಿದ ಶ್ರೀಮಹಾಲಕ್ಷ್ಮಿದೇವೇರ ನೇಮದಿಂದಿಟ್ಟು ನಿಷ್ಠೆಯಲಿ ಸೋಮೇಜಮ್ಮ ತಾ ಮಹಾ ಸಂಭ್ರಮದಿಂದ ಸಾದು ಪರಿಮಳ ಅರಿಷಿಣ ಗಂಧ ಕುಂಕುಮ ಕ್ಯಾದಿಗೆ ಕುಸುಮ ಮಲ್ಲಿಗೆಯ ಮಾಧವನರಸಿ ಮಾಲಕ್ಷ್ಮಿಗರ್ಪಿಸಿ ಮಂಗಳಾರತಿಯನ್ನು ಬೆಳಗುವೋರು ಎಣ್ಣೋರಿಗೆ ತುಪ ಸಣ್ಣ ಶ್ಯಾವಿಗೆ ಪರಮಾನ್ನ ಶಾಲ್ಯಾನ್ನ ಸೂಪಗಳು ಚೆನ್ನವಾಗಿದ್ದ ತಾಂಬೂಲವನರ್ಪಿಸಿ ಅದನ್ನುಂಡರು ಅತಿ ಹರುಷದಲಿ ಸುಂದರ ಗೌರೀ ಶುಕ್ಕುರವಾರ ಪೂಜೆ ಸಾನಂದದಿ ಶನಿವಾರದಲ್ಲಿ ಕುಂದ ಮಂದಾರ ಮಲ್ಲಿಗೆ ಗಂಧ ಕುಂಕುಮ ಚೆಂದುಳ್ಳಾರತಿಯನೆತ್ತಿದರು ಹಿಟ್ಟಿನ ಕಡುಬು ಹಿಂಡಿಯ ಪಲ್ಯವನು ಮಾಡಿ ಅಚ್ಚೆಳ್ಳು ಗಾಣದೆಣ್ಣೆಯನು ನುಚ್ಚು ಮಜ್ಜಿಗೆ ಹುಳಿ ತುಳಿಯ ಕಟ್ಟಂಬಲಿ ಇಟ್ಟರು ನೈವೇದ್ಯಗಳನು ಭೋಜನಕೆನುತ ಕುಳ್ಳಿರುವೋ ಕಾಲದಿ ಬಂದು ರಾಜನ ಸತಿಯು ನೋಡುತಲಿ ಸೋಜಿಗವೇ ನಿಮ್ಮ ಗೌರಿಯ ಸಂಪತ್ತು ಈ ಜಗದೊಳಗೆ ಕಾಣೆನೆನುತ ಬೇಕೆದರೊಂದು ಬೇಡಲು ಅರಸನ ಸತಿ ಸಾಕು ದರಿದ್ರದಂಬಲಿಯ ಹಾಕಿದ ಹರಡಿ ಕಂಕಣದೊಳು ಸಿಕ್ಕೀತು ನಾ ಕೈಯ್ಯ ಇಡಲಾರೆನೆನಲು ತಟ್ಟನೆದ್ದು ಹಾಕಿಕೊಂಡಷ್ಟೂ ಪ...
  Sampattu Shukravarada Haadu 🌺🌺🌺🌺🌺🌺 ಸಂಪತ್ತುಶುಕ್ರವಾರದ_ಗೌರಿಹಾಡು 🌺🌺🌺🌺🌺🌺 ಹರನ ಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತೆಯ ಕಥೆಗೆ ವರವ ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೇ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೇ ಮಾ ಲಕ್ಷುಮಿ ಕರುಣಾ- ಕಟಾಕ್ಷದಿ ನೋಡಬೇಕೆನ್ನ ಶ್ರಾವಣಮಾಸದಿ ಮೊದಲ ಶುಕ್ರವಾರ ಮಾಧವನರಸಿ ಮಾಲಕ್ಷ್ಮೀ ದೇವೇರ ಮಹಿಮೆ ಕೊಂಡಾಡುವೋದೀ ಕಥೆ ಕಿವಿಗೊಟ್ಟು ಕೇಳೋದು ಜನರು ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳೂ ಹಸುಗೂಸುಗಳು ಮನೆತುಂಬಾ ಅಶನ ವಸನವಿಲ್ಲ ಹಸಿದ ಮಕ್ಕಳಿಗೆ ಹಾಲು ಮೊಸರು ಅನ್ನವು ಮೊದಲಿಲ್ಲ ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ ಸತಿ ದಯದಿ ನೋಡಿದಳು ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮನೆ ಮುಂದೆ ತೋರಣ ಕಟ್ಟುತಿರಲು ಮನೆಮನೆಯಲ್ಲಿ ಮಾಲಕ್ಷ್ಮೀದೇವೇರ ಚಟ್ಟಿಗೆ ಬರೆವುದನು ತಾ ಕಂಡು ಇದು ಏನು ನೋವಿ ಎನಗೆ ಹೇಳಬೇಕೆಂದು ಘನಭಕ್ತಿಯಿಂದ ಕೇಳಿದನು ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮೀ ದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ರವಾರ ನಾವು ಪೂಜೆಯ ಮಾಡಬೇಕು ಎನಗೊಂದು...